ಸಂಗ್ರಹ ಚಿತ್ರ
ಕೇಂದ್ರ ಜಲ ಆಯೋಗ ಮೇಕೆದಾಟು ಯೋಜನೆಯ ವಿಸ್ತೃತ ವರದಿ ನೀಡುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿರುವುದರಿಂದ ಕೇಂದ್ರಕ್ಕೆ ವರದಿ ಸಲ್ಲಿಸುವ ಮುನ್ನ ಮಾಧ್ಯಮ ಪ್ರತಿನಿಧಿಗಳ ಜತೆ ಸ್ಥಳ ಪರಿಶೀಲನೆ ನಡೆಸಲಿದ್ದಾರೆ. ಸ್ಥಳ ಪರಿಶೀಲನೆಗೆ ಅರಣ್ಯ ಇಲಾಖೆ ಅಧಿಕಾರಿಗಳೂ ತೆರಳಲಿದ್ದಾರೆ.
ಈಗಾಗಲೇ ಡಿಪಿಆರ್ ಸಿದ್ಧಪಡಿಸಲು ಬಜೆಟ್ನಲ್ಲಿ 5 ಕೋಟಿ ರೂ. ಮೀಸಲಿಡಲಾಗಿದೆ. ಸುಮಾರು 64 ಟಿಎಂಸಿ ನೀರು ಸಂಗ್ರಹ ಸಾಮರ್ಥ್ಯದ ಸಮಾನಾಂತರ ಜಲಾಶಯ ನಿರ್ಮಿಸಲು ನಿರ್ಧರಿಸಲಾಗಿದೆ. ಈ ಯೋಜನೆಯಿಂದ ಬೆಂಗಳೂರು ಹಾಗೂ ಸುತ್ತಲಿನ ನಗರಗಳ ಕುಡಿಯುವ ನೀರು ಹಾಗೂ ವಿದ್ಯುತ್ ಉತ್ಪಾದನೆಗೆ ಬಳಸಿಕೊಳ್ಳಲಾಗುತ್ತದೆ. ಈ ಯೋಜನೆಯಿಂದ ತಮಿಳುನಾಡಿಗೆ ಶೇ.95ರಷ್ಟು ಅನುಕೂಲವಾಗಲಿದೆ. ಈ ಯೋಜನೆಯಲ್ಲಿ ಅಲ್ಪ ಪ್ರಮಾಣದಲ್ಲಿ ಖಾಸಗಿ ಜಮೀನು ಮುಳುಗಡೆಯಾಗಲಿದೆ.
ಡಿ.7ರಂದು ಮೇಕೆದಾಟು ಹಾಗೂ ಶಿವನ ಸಮುದ್ರ ನೋಡಿಕೊಂಡು ರಾತ್ರಿ ಕೆಆರ್ಎಸ್ಗೆ ತೆರಳಲಾಗುವುದು. ಕೆಆರ್ಎಸ್ನಲ್ಲಿ ಡಿಸ್ನಿಲ್ಯಾಂಡ್ ಮಾದರಿಯ ಯೋಜನೆ ಅನುಷ್ಠಾನ ಮಾಡುವ ಕುರಿತು ಸ್ಥಳೀಯ ಶಾಸಕರು, ಜಿಲ್ಲಾ ಉಸ್ತುವಾರಿ ಸಚಿವರು, ಪ್ರವಾಸೋದ್ಯಮ ಸಚಿವರ ಜತೆ ಚರ್ಚಿಸಲಿದ್ದಾರೆ.
ಡಿಸ್ನಿಲ್ಯಾಂಡ್ ನಿರ್ಮಾಣಕ್ಕೆ ಒಂದು ಸಮಿತಿ ರಚಿಸಲು ತೀರ್ಮಾನಿಸಲಾಗಿದೆ. ಆ ಸಮಿತಿಯಲ್ಲಿ ಮೈಸೂರು ರಾಜವಂಶಸ್ಥರು ಇರಲಿದ್ದಾರೆ ಎಲ್ಲರ ಅಭಿಪ್ರಾಯಗಳನ್ನು ಪಡೆದು ಯೋಜನೆ ಆರಂಭಿಸಲಾಗುವುದು.
ಈ ಭೇಟಿ ವೇಳೆ ಸಚಿವರು ಮೇಕೆದಾಟು, ಶಿಂಶಾ, ಸಂಗಮ, ಕೆಆರ್ಎಸ್ ಸುತ್ತಿ ಮಾಹಿತಿ ಸಂಗ್ರಹಿಸಲಿದ್ದಾರೆ. ಶುಕ್ರವಾರ ಬೆಳಗ್ಗೆ ಆರಂಭವಾಗಿ ಶನಿವಾರ ಸಂಜೆಯವರೆಗೆ ಪ್ರವಾಸ ಮುಂದುವರಿಯಲಿದೆ.